ಕಾರವಾರ:-ಕಟ್ಟಿಗೆ ತರಲು ಹೋಗಿದ್ದ ಮಹಿಳೆಯ ಕೈಗೆ ಗುಂಡು ತಗಲಿದೆ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದ ಗೋಯಲ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.ರಸಿಕಾ(38) ಗುಂಡು ತಗಲಿ ಗಾಯಗೊಂಡ ಮಹಿಳೆಯಾಗಿದ್ದು ನಿನ್ನೆ ಸಂಜೆ ವೇಳೆ ಕಟ್ಟಿಗೆ ತರಲು ಅರಣ್ಯಕ್ಕೆ ತೆರಳಿದ್ದ ಮಹಿಳೆಗೆ ಕೈಗೆ ಗಾಯವಾಗಿತ್ತು.ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಸ್ಕ್ಯಾನ್ ಮಾಡಿ ಪರೀಕ್ಷಿಸಿದಾಗ ಆಕೆ ಕೈ ಒಳಭಾಗದಲ್ಲಿ ಗುಂಡಿನ ಚೂರುಗಳು ಪತ್ತೆಯಾಗಿದೆ. ಘಟನೆ ಸಂಬಂಧ ಕದ್ರಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.ಕಾಡಿನಲ್ಲಿ ಕಾಡುಪ್ರಾಣಿ ಬೇಟೆಯಾಡುವವರು ಪ್ರಾಣಿ ಎಂದು ಗುಂಡು ಹಾರಿಸಿರುವ ಸಾಧ್ಯತೆಗಳಿವೆ ಎನ್ನಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಅಪರಾಧಇತರೆಪ್ರಮುಖ ಸುದ್ದಿ
ಕಾರವಾರದಲ್ಲಿ ಕಟ್ಟಿಗೆ ತರಲು ಹೋದ ಮಹಿಳೆಗೆ ಗುಂಡು!
By adminಡಿಸೆ 05, 2020, 09:17 ಫೂರ್ವಾಹ್ನ0
Previous Postಅಂಕೋಲದಲ್ಲಿ ಭೀಕರ ರಸ್ತೆ ಅಪಘಾತ!ಓರ್ವ ಸಾವು.
Next Postಹೊನ್ನಾವರ ಪ್ಲಕ್ಸ್ ಪ್ರಿಂಟರ್ ಅಂಗಡಿಗೆ ಬೆಂಕಿ!