ಕಾರವಾರ :- ಚಲಿಸುತ್ತಿದ್ದ ಓಮಿನಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೀರ್ನಳ್ಳಿ ಕ್ರಾಸ್ ಬಳಿ ನಡೆದಿದೆ.
ಶಿರಸಿ ತಾಲೂಕಿನ ಶಿಂಗನಮನೆಯ
ವಿನಾಯಕ ಹೆಗಡೆ ಎಂಬುವವರಿಗೆ ಸೇರಿದ ಓಮಿನಿ ಇದಾಗಿದ್ದು ಶಿರಸಿ ಕಡೆ ಬರುತಿದ್ದಾಗ ತಾಂತ್ರಿಕ ಕಾರಣದಿಂದ ಓಮಿನಿಗೆ ಬೆಂಕಿ ತಗುಲಿದ್ದು ಸುಟ್ಟು ಬಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಬೆಂಕಿ ನಂದಿಸಿದ್ದು ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಡಿಯೋ ನೋಡಿ.