
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಗಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿ ಘಟನೆ ನಡೆದಿದೆ.


ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಅಪಘಾತದಲ್ಲಿ ಮೃತರಾದವರು.
ತನ್ನ ಮಗಳನ್ನು ಯಲ್ಲಾಪುರದಿಂದ ತಮ್ಮ ಸ್ವಂತ ಊರಾದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಬಿಡಲು ಹೊರಟಿದ್ದರು ಎನ್ನಲಾಗಿದೆ. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದ್ದು ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.