ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಕೆ.ಹರೀಶಕುಮಾರ್ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಕಳೆದ ಎರಡು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಡಾ.ಕೆ.ಹರೀಶಕುಮಾರ್ ಎಲ್ಲರ ಪ್ರೀತಿ ಗಳಿಸಿದ್ದರು.
2013ನೇ IAS ಬ್ಯಾಚ್ ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಯಲ್ಲಿ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಲ್ಲೈ ಇನ್ನುಮುಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.